ಕರಿಬೇವಿನ ಔಷಧಿ ಗುಣಗಳು (Curry leaves)

Share this with your friends...



















ಕರಿಬೇವಿನ ಔಷಧಿ ಗುಣಗಳು : ಕರಿಬೇವು ಎಂದಾಕ್ಷಣ ಒಗ್ಗರಣೆಯ ನೆನಪಾಗುತ್ತದೆ. ಇದನ್ನು ಒಗ್ಗರಣೆ ಸೊಪ್ಪು  ಎಂದು ಕೂಡ ಕರೆಯುತ್ತಾರೆ. ಕರಿಬೇವನ್ನು ಆಹಾರ ಪದಾರ್ಥಗಳಲ್ಲಿ ಹೆಚ್ಚಾಗಿ ಉಪಯೋಗಿಸದಿದ್ದರೆ ರುಚಿಯೇ ಬರುವುದಿಲ್ಲ. ಇದನ್ನು ಸಾಂಬಾರಿಗೆ ಒಗ್ಗರಣೆ ಕೊಡಲು, ಬಜೆ ಮಾಡಲು, ಚಟ್ನಿ ಮಾಡಲು, ಪಲ್ಯ ಮಾಡುವಾಗ ಇದರ ಬಳಕೆ ಹೆಚ್ಚು. ಕರಿಬೇವು ಇಲ್ಲದ ಅಡುಗೆ ರುಚಿಹೀನ ಎನ್ನಬಹುದು. ಈ ಕರಿಬೇವು ಅಡುಗೆಗೆ ಮಾತ್ರ ಸೀಮಿತವಾಗಿಲ್ಲ, ಇದನ್ನು ಸೌಂಧರ್ಯ ವರ್ಧಕವಾಗಿಯೂ ಉಪಯೋಗಿಸುತ್ತಾರೆ.

ಕರಿಬೇವಿನ ಎಲೆಗಳು ಕಡು ಹಸಿರು ಬಣ್ಣದಲ್ಲಿದ್ದು,ತುಂಬಾ ಸುವಾಸನೆ ಭರಿತವಾಗಿರುತ್ತವೆ. ಕರಿಬೇವು ದೊಡ್ಡ ಮರವಾಗಿ ಬೆಳೆಯುತ್ತದೆ. ಇದು ಕಾಡಿನಲ್ಲಿ ಹೆಚ್ಚಾಗಿ ಬೆಳೆಯುತ್ತದೆ. ಇದನ್ನು ಮನೆ ಅಂಗಳದಲ್ಲಿಯೂ ಸುಲಭವಾಗಿ ಬೆಳೆಸಬಹುದಾಗಿದೆ. ಕರಿಬೇವಿನಲ್ಲಿ ಕಾರ್ಬೋಹೈಡ್ರೇಟ್, ಫೈಬರ್, ಕ್ಯಾಲ್ಸಿಯಿಂ, ಕಬ್ಬಿಣ, ವಿಟಮಿನ್ ಸಿ, ,ಬಿ, ಎ ಪೋಷಕಾಂಶಗಳು ಇರುತ್ತವೆ. ಇದರ ವೈಜ್ಞಾನಿಕ ಹೆಸರು ಮರಯ ಕೊನಿಗೆ (Murraya Koenigii). ಕರಿಬೇವನ್ನು ಹೆಚ್ಚು ಹೆಚ್ಚು ಆಹಾರದಲ್ಲಿ ಬಳಸುವುದು ತುಂಬಾ ಸಹಾಯಕಾರಿಯಾಗಿದೆ. ಇದು ಹೆಚ್ಚಿನ ಔಷಧಿ ಗುಣಗಳನ್ನು ಹೊಂದಿದೆ.

ಕರಿಬೇವಿನ ಔಷಧಿ ಗುಣಗಳು

ಬಿಳಿ ಕೂದಲ ಸಮಸ್ಯೆಯನ್ನು ಕರಿಬೇವು ದೂರಮಾಡುತ್ತದೆ

ದೇಹದಲ್ಲಿ ಪೋಷಕಾಂಶದ ಕೊರತೆಯಾದಾಗ ಮಕ್ಕಳಿಗೆ ಕೂದಲು ಬೇಗ ಬಿಳಿಯಾಗುತ್ತದೆ. ಇಂತಹ ಸಮಸ್ಯೆಗೆ ಕರಿಬೇವು ತುಂಬಾ ಸಹಕಾರಿಯಾಗಿದೆ. ಹಾಗು ಕೂದಲ ಬೆಳವಣಿಗೆಗೂ ಉಪಯುಕ್ತವಾಗಿದೆ .

ಕರಿಬೇವಿನ ಎಲೆಗಳನ್ನು ಒಣಗಿಸಿ, ಅದನ್ನು ಕೊಬ್ಬರಿ ಎಣ್ಣೆಯಲ್ಲಿ, ಎಣ್ಣೆ ಹಸಿರು ಬಣ್ಣಕ್ಕೆ ಬರುವ ವರೆಗೂ ಕುದಿಸಬೇಕು. ನಂತರ ತಣಿಸಿ ಕೂದಲಿಗೆ ಪ್ರತಿ ವಾರಕೊಮ್ಮೆ ಹಚ್ಚುವುದರಿಂದ ಕೂದಲು ಬಿಳಿಯಾಗುವುದನ್ನು ತಡೆಯಬಹುದು.

ಎಸಿಡಿಟಿಯನ್ನು ಕರಿಬೇವು ಕಡಿಮೆಮಾಡುತ್ತದೆ.

ಕರಿಬೇವಿನ ಮರದ ತೊಗಟೆಯನ್ನ ಒಣಗಿಸಿ, ಪುಡಿಮಾಡಿಕೊಂಡು, ಒಂದು ಚಮಚ ಆ ಪುಡಿಯನ್ನು ನೀರಲ್ಲಿ ಬೆರಸಿ ಸೇವಿಸದರೆ ಎಸಿಡಿಟಿ ಕಡಿಮೆಯಾಗುತ್ತದೆ.

ಕರಿಬೇವಿನಲ್ಲಿ ವಾಯುಕಾರಕವನ್ನು ತೆಗೆದು ಹಾಕುವ ಗುಣವಿದೆ

1 ರಿಂದ 2 ಚಮಚದಷ್ಟು ಕರಿಬೇವಿನ ಎಲೆಯ ರಸಕ್ಕೆ, 1 ಚಮಚ ನಿಂಬೆ ರಸ ಮತ್ತು ಸಕ್ಕರೆ ಸೇರಿಸಿ ಸೇವಿಸುವುದರಿಂದ ಅಜೀರ್ಣವನ್ನು ಹೋಗಲಾಡಿಸಬಹುದು. ಅಥವಾ ಕರಿಬೇವನ್ನು ಪ್ರತಿದಿನ ಆಹಾರದಲ್ಲೂ ಕೂಡ ಉಪಯೋಗಿಸಬಹುದು.
ಬೇಧಿ, ಆಮಶಂಕೆ ನಿವಾರಣೆಗೆ ಕರಿಬೇವು ಸಹಕಾರಿ
ಎಳೆಯದಾದ ಕರಿಬೇವಿನ ಎಲೆಯನ್ನು ಜೇನು ತುಪ್ಪದೊಂದಿಗೆ ತಿನ್ನುವುದು, ಅಥವಾ ಕರಿಬೇವಿನ ಎಲೆಯನ್ನು ಚೆನ್ನಾಗಿ ಅರೆದು ಮಜ್ಜಿಗೆಯೊಂದಿಗೆ ಸ್ವಲ್ಪ ಶುಂಠಿ ಸೇರಿಸಿ ಕುಡಿಯುವುದರಿಂದ ಬೇಧಿ, ಆಮಶಂಕೆಯನ್ನು ನಿವಾರಿಸಬಹುದು.

ಬೊಜ್ಜು ಕರಗಿಸಲು ಕರಿಬೇವು ಸಹಕಾರಿ

ಕೆಲವರಿಗೆ ದೇಹದ ತೂಕ  ಕಡಿಮೆ ಮಾಡುವುದು ಹೇಗೆ ಎಂಬುದೇ ದೊಡ್ಡ ಚಿಂತೆಯಾಗಿರುತ್ತದೆ. ಕರಿಬೇವು ದೇಹದಲ್ಲಿನ ಕೊಲೆಸ್ಟ್ರಾಲನ್ನು ಕಡಿಮೆ ಮಾಡುವುದರ ಮೂಲಕ ದೇಹದ ತೂಕವನ್ನು ಕಡಿಮೆಗೊಳಿಸುತ್ತದೆ. ಪ್ರತಿದಿನ ಬೆಳಿಗ್ಗೆ  ಖಾಲಿ ಹೊಟ್ಟೆಗೆ 8 ರಿಂದ 10 ತಾಜಾ ಕರಿಬೇವಿನ ಎಲೆಗಳನ್ನು ಜಗಿದು ತಿನ್ನುವುದರಿಂದ ದೇಹದ ತೂಕ ಕಡಿಮೆ ಮಾಡಬಹುದು.

ಕರಿಬೇವು ಕಾಮಾಲೆ ರೋಗವನ್ನು ಗುಣಪಡಿಸುವ ಗುಣವನ್ನು ಹೊಂದಿದೆ

10 ರಿಂದ 12 ಕರಿಬೇವಿನ ಎಲೆಗಳನ್ನ ನೀರಿನಲ್ಲಿ ಚೆನ್ನಾಗಿ ತೊಳೆಯಬೇಕು. ಏಕೆಂದರೆ ಎಲೆಗಳ ಮೇಲೆ ಸಣ್ಣ ಪುಟ್ಟ ಕಶ್ಮಲಗಳು ಅಥವಾ ಹುಳು ಹಪ್ಪಟೆಗಳು ಹರಿದಿರುವ ಸಾಧ್ಯತೆ ಇರುತ್ತದೆ. ನಂತರ ಎಲೆಗಳನ್ನು ಅರೆದು ಆ ಮಿಶ್ರಣವನ್ನು ಸುಮಾರು 60 ರಿಂದ 100 ಮೀ ಲಿ ಎಳೆನೀರಿನೊಂದಿಗೆ  ಕುಡಿಯುವುದರಿಂದ ಕಾಮಾಲೆ ರೋಗವನ್ನು  ಹೋಗಲಾಡಿಸಬಹುದು.

ರಕ್ತಹೀನತೆಯ ನಿವಾರಣೆಗೆ ಕರಿಬೇವು ಸಹಕಾರಿ

1/2 ಚಮಚ ಕರಿಬೇವು ಸೊಪ್ಪಿನ ಪುಡಿಯನ್ನು, ಜೇನು ತುಪ್ಪದ ಜೊತೆ ಸಮ ಪ್ರಮಾಣದಲ್ಲಿ ಬೆರಸಿ ಸೇವಿಸುವುದರಿಂದ ಅದರಲ್ಲಿರುವ ಕಬ್ಬಿಣದ ಅಂಶ ರಕ್ತಹೀನತೆಯನ್ನು ನಿವಾರಿಸುತ್ತದೆ.
ಕರಿಬೇವು ಕೂದಲು ಉದುರುವುದನ್ನು ತಡೆಯುತ್ತದೆ


ಕೂದಲು ಉದುರುವುದು, ಕೂಡಲು ಸಿಳುವುಕೆ, ಮತ್ತು  ಹೊಟ್ಟಿನ ಸಮಸ್ಯೆ ಇದ್ದಲ್ಲಿ ಕರಿಬೇವಿನ ಎಲೆಯ ಪೇಸ್ಟ್ ಅಥವಾ ಎಣ್ಣೆಯ ಜೊತೆ ಲಿಂಬೆ ರಸ ಸೇರಿಸಿ, ತಲೆ ಕೂದಲಿನ ಬುಡದಲ್ಲಿ ಹಚ್ಚುವುದರಿಂದ ತಲೆಯಲ್ಲಿ ಹೊಟ್ಟಿನ ಪ್ರಮಾಣ ಕಡಿಮೆಯಾಗುತ್ತದೆ.
ಕರಿಬೇವು ಕೂದಲಿನ ಬೆಳವಣಿಗೆಗೆ ಕಾರಣವಾಗಿರುವ ನ್ಯೂಟ್ರಿಕ್ ಮತ್ತು ಪ್ರೊಟೀನ್ ಅಂಶಗಳನ್ನೂ ಹೊಂದಿದ್ದು, ಕೂದಲು ಉದುರುವುದನ್ನು ತಡೆಯುತ್ತದೆ. ಸ್ವಲ್ಪ ಕರಿಬೇವನ್ನು ತೆಗೆದುಕೊಂಡು, ಪೇಸ್ಟಮಾಡಿಕೊಂಡು ಅದಕ್ಕೆ ಮೊಸರು ಸೇರಿಸಿ ಈ ಮಿಶ್ರಣವನ್ನು ಕೂದಲಿಗೆ ಹಚ್ಚುವುದರಿಂದ, ಕೂದಲು ಉದುರುವುದನ್ನು ತಡೆಯಬಹುದು. ಹಾಗು ಇದರಿಂದ ಕೂದಲು ಕೂಡ ಸೊಂಪಾಗಿ ಬೆಳೆಯುತ್ತದೆ. 
ಕರಿಬೇವು ಅನೇಕ ರೋಗಗಳಿಗೆ ಸಹಕಾರಿಯಾಗಿದೆ
ಕರಿಬೇವಿನ ಕಷಾಯ ಕುಡಿಯುವುದರಿಂದ ದೇಹದಲ್ಲಿ ಉಷ್ಣತೆ ಕಡಿಮೆ ಮಾಡುವುದರ ಮೂಲಕ  ಜ್ವರವನ್ನು ಕಡಿಮೆಮಾಡಬಹುದು. ಮತ್ತು ಕರಿಬೇವು ಮೂಗು ಕಟ್ಟುವುದು, ಶ್ವಾಸಕೋಶದ ಸಮಸ್ಯೆ, ಮತ್ತು ಹೃದಯ ರೋಗದ ಸಮಸ್ಯೆಗಳನ್ನೂ ಹೋಗಲಾಡಿಸುತ್ತದೆ.
ಆಲ್ಕೋಹಾಲ್ ಸೇವಿಸುವವರು ಆಹಾರದಲ್ಲಿ ಕರಿಬೇವನ್ನು ಸೇವಿಸುವುದರಿಂದ ಲಿವರ್ ಸಂಬಂಧಿತ ಕಾಯಿಲೆಗಳಿಂದ ದೂರವಿರಬಹುದು.


Share this with your friends...

Leave a Comment

Your email address will not be published. Required fields are marked *